ಅಗ್ನಿ ದುರಂತ: 3 ಮಕ್ಕಳು ಸೇರಿ 6 ಮಂದಿ ಸಜೀವಧಹನ

ಫಿರೋಜಾಬಾದ್‌ನಲ್ಲಿ ಅಗ್ನಿ ದುರಂತದಲ್ಲಿ 3 ಮಕ್ಕಳ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ.ಆರುಜನ ಸತ್ತವರಲ್ಲಿ ಮೂವರು ಮಕ್ಕಳು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ಎಂಡಿಟಿವಿ ವರದಿ ಮಾಡಿದೆ.
ಕಟ್ಟಡದ ನೆಲಮಹಡಿಯಲ್ಲಿರುವ ಎಲೆಕ್ಟ್ರಾನಿಕ್ಸ್-ಕಮ್-ಫರ್ನಿಚರ್ ಅಂಗಡಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡು ಒಂದು ಕುಟುಂಬದ ಕನಿಷ್ಠ ಆರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದ್ದು, ಅಂಗಡಿ ಮಾತ್ರವಲ್ಲದೆ ಮೊದಲ ಮಹಡಿಯಲ್ಲಿರುವ ಮಾಲೀಕರ ಮನೆಯೂ ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ರೂ 2 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಮೃತ ಆರು ಮಂದಿಯಲ್ಲಿ ಮೂವರು ಮಕ್ಕಳು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ತಿಳಿಸಿದ್ದಾರೆ.
ಆಗ್ರಾ, ಮೈನ್‌ಪುರಿ, ಇಟಾಹ್ ಮತ್ತು ಫಿರೋಜಾಬಾದ್‌ನಿಂದ 18 ಅಗ್ನಿಶಾಮಕ ದಳದ ವಾಹನಗಳು ಮತ್ತು 12 ಪೊಲೀಸ್ ಠಾಣೆಗಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ, ಕಾರ್ಯಚರಣೆ ಸುಮಾರು ಎರಡೂವರೆ ಗಂಟೆಗಳ ಕಾಲ ನಡೆಯಿತು.
“ಪ್ರದೇಶವು ದಟ್ಟಣೆಯಿಂದ ಕೂಡಿರುವುದರಿಂದ, ರಕ್ಷಕರು ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕಾಯಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.
“ನಾವು ಇನ್ನೂ ಒಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!